Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಮೊದಲ ಕಕ್ಷೆ ಬದಲಿಸಲಿದೆ ಆದಿತ್ಯ – ಎಲ್​1

ಬೆಂಗಳೂರು: ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ ಎಲ್-1 ನಿನ್ನೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡಿದ್ದು, ಆದಿತ್ಯ ಎಲ್​1 ತನ್ನ ಮೊದಲ ಕಕ್ಷೆಯನ್ನು ಇಂದು ಬದಲಾಯಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಾಹ್ಯಾಕಾಶ ನೌಕೆಯು ಸುಮಾರು 125 ದಿನಗಳ ಕಾಲ ಪ್ರಯಾಣಿಸುವ ನಿರೀಕ್ಷೆಯಿದ್ದು, ಇದು ಸೂರ್ಯನಿಗೆ ಹತ್ತಿರವಿರುವ ಲಾಗ್ರಾಂಜಿಯನ್ ಪಾಯಿಂಟ್ L1 ಸುತ್ತ ಹಾಲೋ ಕಕ್ಷೆಯನ್ನು ತಲುಪುತ್ತದೆ.

ಇನ್ನು ಆದಿತ್ಯ- ಎಲ್​1 ಭೂಮಿಯ ಸುತ್ತ 16 ದಿನಗಳ ಕಾಲ ಸುತ್ತುತ್ತದೆ ಮತ್ತು ತನ್ನ ವೇಗವನ್ನು ನಿರಂತರವಾಗಿ ಹೆಚ್ಚಿಸುತ್ತದೆ. ಈ ಅವಧಿಯಲ್ಲಿ ಉಪಗ್ರಹದ ಕಕ್ಷೆಯನ್ನು 5 ಬಾರಿ ಬದಲಾಯಿಸಲಾಗುತ್ತದೆ ಎನ್ನಲಾಗಿದೆ.