Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಈ ವ್ಯಕ್ತಿ 15 ಮದುವೆ ಆಗಿದ್ದು ಕೇಳಿದ್ರೆ ನೀವೆ ಶಾಕ್ ಆಗ್ತೀರ.!

 

ಮೈಸೂರು: ಮ್ಯಾಟ್ರಿಮೊನಿಯಲ್ ವೆಬ್ ಸೈಟ್ಗಳ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ಮದುವೆಯಾಗಿ ನಂತರ ಅವರ ಹಣ, ಒಡವೆ ಯೊಂದಿಗೆ ಪರಾರಿ ಯಾಗುತ್ತಿದ್ದ, ಬೆಂಗಳೂರಿನ ಕಾಳಿದಾಸ ನಗರದ ನಿವಾಸಿ ಕೆ.ಬಿ.ಮಹೇಶ್ (35) ಎಂಬಾತನನ್ನು ಇಲ್ಲಿನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿವಾಹ ಸಂಬಂಧಿ ಜಾಲತಾಣ ಗಳಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಳ್ಳು ತ್ತಿದ್ದ ಆರೋಪಿಯು, ಮದುವೆಯಾಗದ ವಯಸ್ಸಾದ ಮಹಿಳೆಯರು, ವಿಧವೆಯರನ್ನು ಹುಡುಕುತ್ತಿದ್ದ. ಅವರಿಗೆ ತಾನು ಡಾಕ್ಟರ್, ಎಂಜಿನಿಯರ್, ಸಿವಿಲ್ ಗುತ್ತಿಗೆದಾರನೆಂದು ಪರಿಚಯಿಸಿ ಕೊಂಡು ಸಂಪರ್ಕ ಬೆಳೆಸುತ್ತಿದ್ದ. ನಂಬಿಸಿ ಮದುವೆ ಮಾಡಿಕೊಳ್ಳುತ್ತಿದ್ದ. ಬಾಡಿಗೆ ಮನೆಗಳಿಗೆ ಕರೆದೊಯ್ದು ಬಿಡುತ್ತಿದ್ದ. ಒಂದಿಷ್ಟು ದಿನ ಜೊತೆಗಿದ್ದು, ಅವರ ಹಣ, ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಬಳಿಕ, ತಾನು ವಿಜಯನಗರದಲ್ಲಿ ಕ್ಲಿನಿಕ್ ತೆರೆಯುತ್ತಿದ್ದು, ₹70 ಲಕ್ಷ ಸಾಲ ತೆಗೆದುಕೊಡುವಂತೆ ಪತ್ನಿಯನ್ನು ಪೀಡಿಸಿದ್ದ. ಒಪ್ಪದಿದ್ದಾಗ ಕೊಲೆ ಬೆದರಿಕೆಯೊಡ್ಡಿದ್ದ. ಫೆ.5ರಂದು ಮನೆಯಲ್ಲಿದ್ದ ₹15 ಲಕ್ಷ ನಗದು ಹಾಗೂ 200 ಗ್ರಾಂನಷ್ಟು ಒಡವೆಗಳೊಂದಿಗೆ ಪರಾರಿಯಾಗಿದ್ದ. ನಂತರ, ದಿವ್ಯ ಎಂಬ ಮಹಿಳೆ ಮನೆಗೆ ಬಂದು, ಮಹೇಶ್ ತನ್ನನ್ನೂ ಮದುವೆಯಾಗಿರುವುದಾಗಿ ಹೇಳಿದ್ದರು. ಮೋಸ ಹೋಗಿರುವುದನ್ನು ಅರಿತು ಹೇಮಲತಾ ಕುವೆಂಪುನಗರ ಠಾಣೆಗೆ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 420, 406, 506 ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತುಮಕೂರಿನ ಮಹರ್ಷಿ ವಾಲ್ಮೀಕಿ ಸರ್ಕಲ್ ಬಳಿ ಶುಕ್ರವಾರ ಬಂಧಿಸಿದರು.

ಆರೋಪಿಯಿಂದ ಎರಡು ಕಾರು, 7 ಮೊಬೈಲ್ ಫೋನ್ ಹಾಗೂ ₹2 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ. 15ಕ್ಕೂ ಹೆಚ್ಚು ಮಹಿಳೆಯರನ್ನು ವಂಚಿಸಿದ್ದಾಗಿ ಆರೋಪಿಯು ಪೊಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಹಾಗಾಗಿ ಇಂತವರನ್ನು ಕಂಡು ಮೋಸ ಹೋಗಬಾರದು ಹುಷಾರ್ ಆಗುರ ಬೇಕು ಅಷ್ಟೆ.!

 

ಡಿಸಿಪಿ ಮುತ್ತುರಾಜು, ಎಸಿಪಿ ಗಂಗಾಧರಸ್ವಾಮಿ ಮಾರ್ಗದರ್ಶನದಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಎಲ್.ಅರುಣ್, ಸಬ್ ಇನ್ಸ್ಪೆಕ್ಟರ್ಗಳಾದ ಎಂ.ರಾಧಾ, ಎಸ್.ಪಿ. ಗೋಪಾಲ್, ನಂಜುಂಡಸ್ವಾಮಿ ಅವರ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.