ಉಡುಪಿ ಶ್ರೀಕೃಷ್ಣ ಮಠಕ್ಕೆ ಕಾಂತಾರ ನಟ ರಿಷಬ್ ಶೆಟ್ಟಿ ಭೇಟಿ
![](https://suddimane.com/wp-content/uploads/2023/09/WhatsApp-Image-2023-09-04-at-9.48.35-AM-1.jpeg)
ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಕಾಂತಾರ ನಟ ರಿಷಬ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸದ್ಯ ಕಾಂತಾರ 2 ಕೆಲಸದಲ್ಲಿರುವ ರಿಷಬ್ ಶೆಟ್ಟಿ ಅವರು ಮಂಗಳೂರಿನ ಅನಂತ ನಮನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವೇಳೆ ಉಡುಪಿಗೆ ತೆರಳಿದ್ದ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಇದಕ್ಕೂ ಮೊದಲು ಪರ್ಯಾಯ ಮಠಾಧೀಶರನ್ನು ಭೇಟಿ ಆಗಿ ಆಶೀರ್ವಾದ ಪಡೆದರು.