Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಎನ್‌ಕೌಂಟರ್ ಬಳಿಕ ವಾಂಟೆಡ್ ಆರೋಪಿಯ ಬಂಧಿಸಿದ ಪೊಲೀಸರು

ಸಹರಣ್ ಪುರ್: ಗ್ಯಾಸ್ ಏಜೆನ್ಸಿಯಲ್ಲಿ ದರೋಡೆ ನಡೆಸಿದ ಆರೋಪಿಯನ್ನು ಶನಿವಾರ ಪೊಲೀಸರು ಎನ್‌ಕೌಂಟರ್ ನಡೆಸಿ ಬಳಿಕ ಬಂಧಿಸಿರುವ ಘಟನೆ ನಡೆದಿದೆ.

ದೀಪಕ್ ಬಂಧಿತ ಆರೋಪಿ.

ಈ ಕುರಿತು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಇಂದು ಮುಂಜಾನೆ ನಡೆದ ಎನ್‌ಕೌಂಟರ್ ವೇಳೆ ಓರ್ವ ಪೊಲೀಸ್ ಸಹ ಗಾಯಗೊಂಡಿದ್ದಾರೆ ಬಂಧಿತ ಆರೋಪಿಯ ಸಹಚರ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಇನ್ನು ದೀಪಕ್ ಜುಲೈ 11 ರಂದು ಗ್ಯಾಸ್ ಏಜೆನ್ಸಿಯಲ್ಲಿ ನಡೆದ ದರೋಡೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದ್ದು, ಆತನ ಬಂಧನಕ್ಕೆ ನೆರವಾಗುವ ಮಾಹಿತಿ ನೀಡಿದವರಿಗೆ ಪೊಲೀಸರು 25,000 ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು. ಅಲ್ಲದೆ ದೀಪಕ್ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಅರೋಪಿಯನ್ನು ಅರಣ್ಯಕ್ಕೆ ಮುತ್ತಿಗೆ ಹಾಕಿ ಹಿಡಿಯಲು ಪ್ರಯತ್ನಿಸಿದ್ದು ಈ ವೇಳೆ ಇಬ್ಬರು ಆರೋಪಿಗಳು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು, ಆಗ ಪ್ರತಿದಾಳಿ ನಡೆಸಿ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ.