Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಎರಡು ಬಸ್ ಗಳ ಮುಖಾ ಮುಖಿ 6 ಮಂದಿ ಸ್ಥಳದಲ್ಲಿ ಸಾವು.! ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ.!

 

ಮಹಾರಾಷ್ಟ್ರ; ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ.

ಮುಂಬೈ-ನಾಗ್ಪುರ ಹೆದ್ದಾರಿಯಲ್ಲಿ ಎರಡು ಖಾಸಗಿ ಬಸ್‌ಗಳು ಲಕ್ಷ್ಮೀ ನಗರ ಮಲ್ಕಾಪುರ ಬಳಿಯ ಫ್ಲೈಓವರ್‌ ಮೇಲೆ ಮುಖಾಮುಖಿ ಡಿಕ್ಕಿಯಾಗಿವೆ.

ಎರಡೂ ಬಸ್‌ಗಳಲ್ಲಿ 20 ರಿಂದ 40 ಮಂದಿ ಪ್ರಯಾಣಿಕರಿದ್ದರು. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳು ನುಜ್ಜುಗುಜ್ಜಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.