Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕನ್ನಡ ಸಂಸ್ಕøತಿಯನ್ನು ಬಿಂಬಿಸುವ ಲಾಂಚನ ಮಾದರಿಗಳಿಗೆ ಆಹ್ವಾನ

 

ಬೆಂಗಳೂರು:   ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳಲಿರುವ ಅಂಗವಾಗಿ ಕರ್ನಾಟಕ ಸಂಭ್ರಮ 50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ಕನ್ನಡ ನಾಡು, ನುಡಿ ಹಾಗೂ ಸಂಸ್ಕøತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಚನ(ಲೋಗೋ) ಮಾದರಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ಮಾದರಿ ಲಾಂಚನಕ್ಕೆ 25,000 ಗಳ ನಗದು ಬಹುಮಾನವನ್ನು ನಿಗದಿಪಡಿಸಲಾಗಿದೆ.

ಆಸಕ್ತರು ತಮ್ಮ ಕಲ್ಪನೆಯಲ್ಲಿ ಮೂಡಿಬಂದ ಲಾಂಚನದ ಮಾದರಿಯನ್ನು ಸೆಪ್ಟೆಂಬರ್ 30 ರೊಳಗಾಗಿ ಕಳುಹಿಸಲು ಅವಕಾಶವಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ https://kannadasiri.karnataka.gov.in      ಸಂಪರ್ಕಿಸಬಹುದಾಗಿದೆ.

( ಸಾಂದರ್ಭಿಕ ಚಿತ್ರ)