Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾವೇರಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸುಳಿ ಗೆ ಸಿಲುಕಿ ಮೃತ್ಯು..!

ಕಾವೇರಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಶಿವನಸಮುದ್ರದಲ್ಲಿ ನಡೆದಿದೆ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಶಿವನಸಮುದ್ರದಲ್ಲಿ ನಡೆದಿದೆ.

ಬೆಂಗಳೂರಿನ ಸುಂಕದಕಟ್ಟೆ ವಾಸಿ ಪುನೀತ್ (18) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಸುರಾನ ಕಾಲೇಜ್​ನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಪುನೀತ್ ನಿನ್ನೆ ಸ್ನೇಹಿತರ ಜೊತೆ ಶಿವನ ಸಮುದ್ರಕ್ಕೆ ಪ್ರವಾಸಕ್ಕೆ ಬಂದಿದ್ದ. ನೀರಲ್ಲಿ ಸ್ನಾನ ಮಾಡಲು ಇಳಿದಿದ್ದ ಪುನೀತ್ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಈತನ ಸ್ನೇಹಿತ ಶಾಹೀಲ್ ಲೋಹಿತ್ ಎಂಬಾತ ಕೂಡ ಮುಳುಗುತ್ತಿದ್ದನ್ನು ಕಂಡು ಸ್ಥಳದಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆನ್ನಲಾಗಿದೆ.

ಅಗ್ನಿ ಶಾಮಕ ಸಿಬ್ಬಂದಿ ನೀರುಪಾಲಾಗಿದ್ದ ಪುನೀತ್ ಮೃತ ದೇಹವನ್ನ ಪತ್ತೆ ಹಚ್ಚಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ.

ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.