ಕಾವೇರಿ ವಿಚಾರ: ಒಂದೇ ಮಾರ್ಗ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು: ಬಿಎಸ್ವೈ
![](https://suddimane.com/wp-content/uploads/2023/09/WhatsApp-Image-2023-09-23-at-1.58.38-PM.jpeg)
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ಮೇಲ್ಮನವಿ ಸಲ್ಲಿಸಬೇಕು ಹಾಗೂ ಇಲ್ಲಿಗೆ ತಜ್ಞರ ತಂಡವನ್ನು ಕಳುಹಿಸಿಕೊಡಲಿ. ಜಲಾಶಯದ ನೀರಿನ ಮಟ್ಟವನ್ನು ನೋಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಕುಡಿಯುವ ನೀರು ಕೊಡದೆ ಇರುವ ಪರಿಸ್ಥಿತಿ ಇದೆ. ನಾವು ನೀರು ಬಿಡುವ ಪರಿಸ್ಥಿತಿಯಲ್ಲಿ ಇಲ್ಲ. ಇದರ ಬಗ್ಗೆ ಸುಪ್ರೀಂಕೋರ್ಟ್ ಮನವರಿಕೆ ಮಾಡಿಕೊಡುವ ಎಲ್ಲ ಪ್ರಯತ್ನವನ್ನು ಸರ್ಕಾರ ಮಾಡಬೇಕು ಎಂದು ಹೇಳಿದರು.
ಈಗಾಗಲೇ ನಮ್ಮ ಕುಮಾರಸ್ವಾಮಿಯವರು ಕಾವೇರಿ ಬಗ್ಗೆ ದೆಹಲಿಯಲ್ಲಿ ಚರ್ಚೆ ಮಾಡಿದ್ದಾರೆ. ಇದರ ಬಗ್ಗೆ ಎಲ್ಲರಿಗೂ ಮಾಹಿತಿ ಇದೆ, ಎಲ್ಲರು ಪರವಾಗಿ ಇದ್ದಾರೆ ವಿನಹ, ಯಾರು ಕೂಡ ಇದರ ವಿರೋಧ ಇಲ್ಲ. ಇದಕ್ಕೆ ಒಂದೇ ಮಾರ್ಗ ಮೇಲ್ಮನವಿ ಸಲ್ಲಿಸಬೇಕು. ತಜ್ಞರನ್ನು ಕಳುಹಿಸಿ ಇಲ್ಲಿನ ವಾಸ್ತವ ಸ್ಥಿತಿಯನ್ನು ಅವಲೋಕಿಸಬೇಕು ಎಂದರು.
ಎನ್ಡಿಎಗೆ ಜೆಡಿಎಸ್ ಸೇರುವ ಕುಮಾರಸ್ವಾಮಿ ನಿರ್ಧಾರದಿಂದ ರಾಜ್ಯದಲ್ಲಿ ದೊಡ್ಡ ಶಕ್ತಿ ಬಂದಂತಾಗಿದೆ. ಎಲ್ಲಾ ಲೋಕಸಭಾ ಕ್ಷೇತ್ರ ಗೆಲ್ಲಲು ಇದು ಸಹಕಾರಿಯಾಗುತ್ತದೆ. ಬಿಎಸ್ವೈ ಹೇಳಿದರು.