Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕುಡಿದು ಬಂದು ನಿತ್ಯ ಮಗನಿಂದ ಕಿರುಕುಳ – ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ!

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಪುತ್ರ ಆದರ್ಶ್​(28) ಮೃತ ಯುವಕ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

ಆದರ್ಶ್​ ದಿನವೂ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದು, ಇತ್ತೀಚೆಗೆ ತಾಯಿಯ ಬಳಿ ಹಣ ಕೇಳಿದಾಗ ಕೊಡಲಿಲ್ಲವೆಂದು ಆಕೆಯ ಮೇಲೆ ಹಲ್ಲೆ ಮಾಡಿದ್ದ. ಇದರಿಂದ ಬೇಸತ್ತಿದ್ದ ತಂದೆ ಜಯರಾಮಯ್ಯ ಅವರು ಮಗನ ಕೈಕಾಲು ಕಟ್ಟಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಈ ಕುರಿತು ದೊಡ್ಡಬೆಳವಂಗಲ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.