Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

’ಕೇಂದ್ರ ಸರ್ಕಾರ ಎರಡು ರಾಜ್ಯದ ನಾಯಕರನ್ನು ಕರೆಸಿ ಮಾತಾಡಲಿ’- ಡಿಕೆಶಿ

ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ನಾಯಕರನ್ನು ಕರೆಸಿ ಮಾತಾಡಿ ಸಮಸ್ಯೆ ಬಗೆಹರಿಸಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಮಂತ್ರಿಗಳು ಬೆಂಗಳೂರು-ದೆಹಲಿ ಅಂತ ಓಡಾಡುವ ಬದಲು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ ಎಂಬ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಅವರು , ತಮ್ಮ ಸರ್ಕಾರ ಆ ಪ್ರಯತ್ನವನ್ನೂ ಮಾಡಿದೆ ಆದರೆ ಎಲ್ಲರಿಗೂ ತಮ್ಮ ರಾಜ್ಯಗಳ ಹಿತರಕ್ಷಣೆ ಕಾಯುವುದು ಮುಖ್ಯವಾಗುತ್ತದೆ ಎಂದರು.

ಮೇಲೆ ಕೂತಿರುವ ಕೇಂದ್ರ ಸರ್ಕಾರಕ್ಕೆ ವಾಸ್ತವಾಂಶದ ಅರಿವಿದೆ. ಅವರು ಎರಡೂ ರಾಜ್ಯಗಳ ನಾಯಕರನ್ನು ಕರೆಸಿ ಮಾತಾಡಿ ಸಮಸ್ಯೆ ಬಗೆಹರಿಸಲಿ ಎಂದು ಹೇಳಿದರು.