Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಖುಷಿ’ ಸಿನಿಮಾ ಸಕಸ್ಸ್‌: 1 ಕೋಟಿ ರೂ. ದಾನ ಮಾಡಿ ಸಂಭ್ರಮಿಸಿದ ವಿಜಯ್ ದೇವರಕೊಂಡ

ಮುಂಬೈ:ವಿಜಯ್ ದೇವರಕೊಂಡ , ಸಮಂತಾ ರುತ್ ಪ್ರಭು ಅಭಿನಯದ ‘ಖುಷಿ’ ಸಿನಿಮಾ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಿದೆ. ಸಿನಿಮಾ 4ನೇ ದಿನಕ್ಕೆ 75 ಕೋಟಿ ರೂಪಾಯಿ ಬಾಚಿಕೊಂಡಿದೆ. ಸತತ ಸೋಲು ಕಾಣುತ್ತಿದ್ದ ವಿಜಯ್ ಈ ಸಿನಿಮಾದಿಂದ ಗೆಲುವಿನ ನಗೆ ಬೀರಿದ್ದಾರೆ. ಇದರ ಬೆನ್ನಲೇ ಖುಷಿ ವಿಚಾರವೊಂದನ್ನು ದೇವರಕೊಂಡ ಹಂಚಿಕೊಂಡಿದ್ದಾರೆ.

ಖುಷಿ’ ಸಿನಿಮಾದ ಯಶಸ್ಸಿನಿಂದ ಫುಲ್ ಖುಷ್ ಆದ ವಿಜಯ ದೇವರಕೊಂಡ ಒಂದು ಕೋಟಿ ರೂಪಾಯಿ ದಾನ ಮಾಡುವುದಾಗಿ ಹೇಳಿದ್ದಾರೆ. ಈ ಸಿನಿಮಾದ ಸಂಭಾವನೆಯಲ್ಲಿ ಒಂದು ಕೋಟಿ ರೂಪಾಯಿ ಹಣವನ್ನು ದಾನ ಮಾಡುತ್ತೇನೆ ಎಂದಿದ್ದಾರೆ.
100 ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಚೆಕ್ ನೀಡುವುದಾಗಿ ಘೋಷಿಸಿದ್ದಾರೆ. ಸೋಮವಾರ ವಿಶಾಖಪಟ್ಟಣಂನಲ್ಲಿ ನಡೆದ ಸಿನಿಮಾದ ಸಕ್ಸಸ್ ಮೀಟ್​​ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ವಿಜಯ್ ದೇವರಕೊಂಡ ಈ ಕುರಿತು ಮಾತನಾಡಿದ್ದು, ಈ ಖುಷಿಯನ್ನು ಹೆಚ್ಚಿಸಲು ನಾನು ‘ಖುಷಿ’ ಸಿನಿಮಾದ ಸಂಭಾವನೆಯಲ್ಲಿ ಒಂದು ಕೋಟಿ ರೂಪಾಯಿಯನ್ನು ಅಗತ್ಯವಿರುವ ಕುಟುಂಬಗಳಿಗೆ ನೀಡುತ್ತೇನೆ. ಮುಂದಿನ ಹತ್ತು ದಿನಗಳಲ್ಲಿ ಈ ಕೆಲಸವನ್ನು ಪೂರ್ಣಗೊಳಿಸುತ್ತೇನೆ. ನನ್ನ ಯಶಸ್ಸು, ನನ್ನ ಸಂತೋಷ, ನನ್ನ ಸಂಬಳವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ’ ಎಂದಿದ್ದಾರೆ.

‘ಸ್ಪ್ರೆಡ್ಡಿಂಗ್ ಖುಷಿ ಅಥವಾ ದೇವರ ಫ್ಯಾಮಿಲಿ ಎಂಬ ಹೆಸರಿನಲ್ಲಿ ಬುಧವಾರ ಇನ್​ಸ್ಟಾಗ್ರಾಂ ಮೂಲಕ ಫಾರ್ಮ್ ಹಂಚಿಕೊಳ್ಳುತ್ತೇನೆ. ಇದರ ಮೂಲಕ ಅಗತ್ಯವಿರುವವರು ನಿಮ್ಮ ಹೆಸರನ್ನು ನಮೂದಿಸಬಹುದು. ಮನೆ ಬಾಡಿಗೆ, ಮಕ್ಕಳ ಶಾಲಾ ಫೀಸ್ ಹೀಗೆ ಯಾವುದೇ ವಿಷಯಕ್ಕೆ ಹಣ ಬಳಕೆಯಾದರೂ ನನಗೆ ಸಂತೋಷವಾಗುತ್ತದೆ ಎಂದರು.