Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಗಂಡಸರು ದೂರ ನಿಲ್ಲಿ ನನ್ನನ್ನು ಮುಟ್ಟಬೇಡಿ ನಾನು ಪವಿತ್ರಳಾಗಿದ್ದೇನೆ’-ರಾಖಿ ಸಾವಂತ್​

ಮುಂಬೈ:ನಟಿ ರಾಖಿ ಸಾವಂತ್​ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಈ ಹಿಂದೆ ಪತಿ ಆದಿಲ್​ ಖಾನ್​ ದುರಾನಿ ಜೊತೆ ಅವರು ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ  ಮೆಕ್ಕಾ ಮದೀನಾಗೆ ಭೇಟಿ ನೀಡಿ ಬಂದಿರುವ ರಾಖಿ   ಅವರ ಮಾತಿನ ವರಸೆ ವೇಷ-ಭೂಷಣ ಕೂಡ ಬದಲಾಗಿ ಹೋಗಿದೆ.

ರಾಖಿ ಸಾವಂತ್​ ಈಗ ಮೈ ತುಂಬಾ ಬಟ್ಟೆ ಧರಿಸುತ್ತಿದ್ದಾರೆ. ಅಲ್ಲದೇ ‘ಗಂಡಸರು ಹತ್ತಿರಕ್ಕೆ ಬಂದರೆ ಹುಷಾರ್​’ ಎಂದು ಹೇಳುತ್ತಿದ್ದಾರೆ. ಆ ರೀತಿ ಅವರು ಕೂಗಾಡಿದ ವಿಡಿಯೋ ವೈರಲ್​ ಆಗಿದೆ.

ತಮ್ಮ ಫೋಟೋ ಕ್ಲಿಕ್ಕಿಸಲು ಬಂದ ಪಾಪರಾಜಿಗಳು ಮತ್ತು ಪುರುಷ ಅಭಿಮಾನಿಗಳನ್ನು ಕಂಡು ರಾಖಿ ಸಾವಂತ್​ ಕೂಗಾಡಿದ್ದಾರೆ. ಮೆಕ್ಕಾ ಮದೀನಾಗೆ ಹೋಗಿ ಬಂದ ಬಳಿಕ ಅವರಲ್ಲಿ ಬದಲಾವಣೆ ಕಂಡು ಎಲ್ಲರಿಗೂ ಆಶ್ಚರ್ಯವಾಗಿದೆ.

ಇತ್ತೀಚೆಗೆ ರಾಖಿ ಸಾವಂತ್​ ಅವರು ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ‘ನಾನು ಮೆಕ್ಕಾ ಮದೀನಾಗೆ ಹೋಗಿ ಬಂದಿದ್ದೇನೆ. ಗಂಡಸರು ದೂರ ನಿಲ್ಲಿ. ನನ್ನನ್ನು ಮುಟ್ಟಬೇಡಿ. ನಾನು ಪವಿತ್ರಳಾಗಿದ್ದೇನೆ’ ಎಂದು ರಾಖಿ ಸಾವಂತ್​ ಕಿಡಿಕಾರಿದ್ದಾರೆ.