ಮೊದಲು ಗೌರಿ ಪೂಜೆ ನಡೆಯುತ್ತದೆ. ನಂತರ ಗಣಪತಿಯನ್ನು ಪೂಜಿಸಲಾಗುತ್ತದೆ. ಜನರು ಬೀದಿ ಬೀದಿಗಳಲ್ಲಿ, ಮನೆ ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಕೂರಿಸಿ ಪೂಜೆ ಸಲ್ಲಿಸುತ್ತಾರೆ. ಹಲವು ಸಿಹಿತಿಂಡಿಗಳನ್ನು ಮನೆಯಲ್ಲೇ ತಯಾರಿಸಿ, ವಿಘ್ನ ವಿನಾಯಕನಿಗೆ ನೈವೇದ್ಯವಾಗಿ ಸಲ್ಲಿಸಿ ಖುಷಿ ಪಡುತ್ತಾರೆ. ಗಣೇಶನ ಹಬ್ಬ ಅಂದ್ರೆ ಅಲ್ಲಿ ಮೋದಕ ಇರ್ಲೇಬೇಕು. ಮೋದಕ ಗಣೇಶನಿಗೆ ಅತ್ಯಂತ ಪ್ರಿಯವಾದುದಾಗಿದೆ. ಆದ್ದರಿಂದ ಗಣೇಶ ಚತುರ್ಥಿಯಂದು ಇದನ್ನು ಎಲ್ಲರ ಮನೆಯಲ್ಲಿಯೂ ತಯಾರು ಮಾಡುತ್ತಾರೆ.