Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗುಜರಾತ್‌ನಲ್ಲಿ ಹಳೆಯ ಸೇತುವೆ ಕುಸಿದು 10 ಮಂದಿ ಜಲಸಮಾಧಿ

ಗುಜರಾತ್‌: ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ ಡಂಪರ್ ಮತ್ತು ಮೋಟಾರ್‌ಸೈಕಲ್‌ಗಳು ಸೇರಿದಂತೆ ಅನೇಕ ವಾಹನಗಳು ನದಿಗೆ ಧುಮುಕಿದ ಘಟನೆ ಸುರೇಂದ್ರನಗರ ಜಿಲ್ಲೆಯ ವಸ್ತಾಡಿ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಘಟನೆಯಲ್ಲಿ ಕನಿಷ್ಠ 10 ಜನರು ಕೊಚ್ಚಿ ಹೋಗಿದ್ದಾರೆ ಮತ್ತು ನಾಲ್ವರನ್ನು ರಕ್ಷಿಸಲಾಗಿದೆ. ಉಳಿದ ಆರು ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗುತ್ತಿದೆ.

ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಿಸಿದ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಜಿಲ್ಲಾಧಿಕಾರಿ ಕೆ.ಸಿ.ಸಂಪತ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಿಂದ ಚುರಾ ತಹಸಿಲ್‌ಗೆ ಸಂಪರ್ಕ ಕಲ್ಪಿಸುವ ಸೇತುವೆ 40 ವರ್ಷಗಳಷ್ಟು ಹಳೆಯದು. ಭಾರಿ ವಾಹನಗಳಿಗೆ ಸೇತುವೆ ಪ್ರವೇಶವನ್ನು ಅಧಿಕಾರಿಗಳು ನಿರ್ಬಂಧಿಸಿದ್ದರು ಎನ್ನಲಾಗಿದೆ.