Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗೆಳತಿಯನ್ನು ಅರೆಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿದ ಪಾಪಿ..!

ಜಾರ್ಖಂಡ್‌: ತನ್ನ ಗೆಳತಿಯನ್ನು ಮನೆಗೆ ಕರೆಸಿ ಹಲ್ಲೆ ನಡೆಸಿ ರಾತ್ರಿಯಿಡೀ ಮರಕ್ಕೆ ಬೆತ್ತಲೆಯಾಗಿ ಕಟ್ಟಿ ಹಾಕಿದ ಘಟನೆ ಜಾರ್ಖಂಡ್‌ನ ಗಿರಿದಿಹ ಜಿಲ್ಲೆಯಲ್ಲಿ ನಡೆದಿದೆ.

ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ವರದಿಯಾಗಿದೆ. ಗೆಳೆಯನ ಜೊತೆ ಆತನ ತಂದೆ-ತಾಯಿ ಮತ್ತು ಮಲತಾಯಿ ಕೂಡ ಹಲ್ಲೆ ನಡೆಸಿ ಅರೆಬೆತ್ತಲೆಯಾಗಿ ಮರಕ್ಕೆ ಕಟ್ಟಿ ಹಾಕಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದೂರಿನ ಅನ್ವಯ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.