Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚಂದ್ರಯಾನ-3 ಯಶಸ್ವಿಗಾಗಿ ಇಸ್ರೋ ವಿಜ್ಞಾನಿಗಳ ತಂಡದಿಂದ ತಿರುಪತಿಯಲ್ಲಿ ಪೂಜೆ

ತಿರುಪತಿ: ನಾಳೆ ಉಡಾವಣೆ ಮಾಡಲಿರುವ ಚಂದ್ರಯಾನ-3 ಯಶಸ್ವಿ ಆಗಲೆಂದು ಇಸ್ರೋ ವಿಜ್ಞಾನಿಗಳ ತಂಡ ತಿರುಪತಿ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.

ಇಸ್ರೋದ ವೈಜ್ಞಾನಿಕ ಕಾರ್ಯದರ್ಶಿ ಶಾಂತನು ಭಟ್ವಾಡೇಕರ್ ಜೊತೆ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಮಾದರಿಯೊಂದಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಂತನು ಭಟ್ವಾಡೇಕರ್, ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ 3 ಉಡಾವಣೆ ಶುಕ್ರವಾರ ಮಧ್ಯಾಹ್ನ 2:35ಕ್ಕೆ ನಡೆಯಲಿದ್ದು, ಚಂದ್ರಯಾನ-3 ಅನ್ನು ಎಲ್‌ಎಂವಿ3 ರಾಕೆಟ್‌ ಮೂಲಕ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.