Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಚೈತ್ರಾ ಕುಂದಾಪುರ ಪ್ರಕರಣ ಮಿಕ್ಸಪ್ ಮಾಡಬೇಡಿ’ -ಗೃಹಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಹಿಂದೂ ಸಂಘಟನೆಗೂ ಮಿಕ್ಸಪ್ ಮಾಡುವುದು ಬೇಡ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಹಿಂದೂ ಸಂಘಟನೆಗೆ ಈ ಪ್ರಕರಣವನ್ನು ಬೆರೆಸಿ ನೋಡುವುದು ಸರಿಯಲ್ಲ ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಕೇಸ್​​ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತದೆ. ಪೊಲೀಸರು ಸುಮೊಟೋ ಕೇಸ್​ ದಾಖಲಿಸಿಲ್ಲ. ಕಂಪ್ಲೆಂಟ್ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನ ಆಗಿದೆ ಎಂದು ಹೇಳಿದ್ದಾರೆ.

ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದಿದ್ದಾರೆ.

ಇಂದಿರಾ ಕ್ಯಾಂಟಿನ್ ಬಿಲ್ ಗಾಗಿ ಈ ಪ್ಲಾನ್ ಮಾಡಲಾಗಿದೆ ಎಂಬ ಆರೋಪಕ್ಕೂ ಇದಕ್ಕೂ ವಂಚನೆ ಕೇಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.