Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜೋಡಿ ಕೊಲೆ ಪ್ರಕರಣ – ಮಾಜಿ ಸಂಸದ ಪ್ರಭುನಾಥ್ ಸಿಂಗ್‌‌ಗೆ ಜೀವಾವಧಿ ಶಿಕ್ಷೆ

ನವದೆಹಲಿ: 1995ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

1995ರಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿದದು, ಈ ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ಮಹಾರಾಜ್ ಗಂಜ್ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು 2008ರಲ್ಲಿ ಪಾಟ್ನಾ ಹೈ ಕೋರ್ಟ್ ಖುಲಾಸೆಗೊಳಿಸಿತ್ತು.

ಇನ್ನು ಆಗಸ್ಟ್ 18 ರಂದು, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಭಯ್ ಎಸ್ ಓಕಾ ಮತ್ತು ವಿಕ್ರಮ್ ನಾಥ್ ಅವರ ಪೀಠವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ಮತ್ತು 307 ರ ಅಡಿಯಲ್ಲಿ ಸಿಂಗ್ ಅವರನ್ನು ಅಪರಾಧಿ ಎಂದು ಘೋಷಿಸಿದ್ದು, ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 1 ರಂದು ಪ್ರಕಟಿಸುವುದಾಗಿ ಹೇಳಿತ್ತು. ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್, ಎರಡೂ ಸಂತ್ರಸ್ತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ಸೂಚಿಸಿದೆ.