Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್- ಕಾವಲಿಗೆಂದೇ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ವ್ಯಾಪಾರಿ

ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರೋರಾತ್ರಿ ಟೊಮ್ಯಾಟೊ ಕದ್ದೊಯ್ಯುತ್ತಿದ್ದಾರೆ. ಹೀಗಾಗಿ ತರಕಾರಿ ವ್ಯಾಪಾರಿ ಟೊಮೆಟೋ ಕಾಯಲು ಇಬ್ಬರು ಬೌನ್ಸರ್ ಗಳನ್ನು ನೇಮಿಸಿ ಸುದ್ದಿಯಾಗಿದ್ದಾನೆ.

ಈ ಕುರಿತ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಉತ್ತರ ಪ್ರದೇಶದ ವಾರಣಸಿಯ ತರಕಾರಿ ವ್ಯಾಪಾರಿ ಅಜಯ್ ಫೌಜಿ ಟೊಮ್ಯಾಟೊ ಕಾಯಲು ಇಬ್ಬರು ಬೌನ್ಸರ್ ನೇಮಿಸಿದ್ದಾರೆ.

ಬರಲಿದೆ ಕೇಸರಿ ಬಣ್ಣದ ವಂದೇ ಭಾರತ್ ರೈಲು

ಟೊಮ್ಯಾಟೊ ಬೆಲೆ ಗಗನಕ್ಕೇರಿದೆ.ಹಲವೆಡೆ ಟೊಮ್ಯಾಟೊ ಕಳ್ಳತನ ನಡೆದಿವೆ.ಹೀಗಾಗಿ ಈ ಸಮಸ್ಯೆ ಇಲ್ಲಿ ಆಗಬಾರದು ಎಂದು ಇಬ್ಬರು ಬೌನ್ಸರ್ ನೇಮಕ ಮಾಡಿದ್ದೇನೆ ಎಂದು ಅಜಯ್ ಫೌಜಿ ಹೇಳಿದ್ದಾರೆ. ಟೊಮ್ಯಾಟೊ ಪಕ್ಕದಲ್ಲೇ ನಿಂತುಕೊಂಡಿರುವ ಇಬ್ಬರು ಬೌನ್ಸರ್ ಗ್ರಾಹಕರನ್ನು ಎಚ್ಚರಿಸುತ್ತಿದ್ದಾರೆ. ಈ ಕುರಿತ ವಿಡಿಯೋ ನೋಡಿದ ನೆಟ್ಟಿಗರು ವಿಭಿನ್ನವಾಗಿ ಕಮೆಂಟ್​ ಮಾಡುತ್ತಿದ್ದಾರೆ.