Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೆಹಲಿಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ – ಸ್ಪೈಸ್​​​​ಜೆಟ್ ವಿಮಾನವೊಂದರಲ್ಲಿ ಹೊತ್ತಿಕೊಂಡ ಬೆಂಕಿ

ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್​​​​ಜೆಟ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್​​ಗಳ ಗಮನಕ್ಕೆ ಬಂದಿದೆ.

ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು ಎಂದು ‘ಎಎನ್​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಸ್ಪೈಸ್​​ಜೆಟ್ ಅನ್ನು ವಿಸ್ತರಿತ ಕಣ್ಗಾವಲು ವ್ಯಾಪ್ತಿಯಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ಹೊರಗಿಟ್ಟ ದಿನವೇ ಈ ಘಟನೆ ಸಂಭವಿಸಿದೆ. ಹಲವು ಸುತ್ತಿನ ತಪಾಸಣೆಯ ಬಳಿಕ ಡಿಜಿಸಿಎ ಈ ಕ್ರಮ ಕೈಗೊಂಡಿತ್ತು. ವಿಮಾನಕ್ಕೆ ಬೆಂಕಿ ಹೊತ್ತಿದ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶಿಸಿದೆ.