Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ನನ್ನ ವಿರುದ್ಧ ಹೈದರ್‌ಬಾದ್‌ನಲ್ಲಿ ಸ್ಪರ್ಧಿಸಿ ‘- ರಾಹುಲ್‌ಗೆ ಓವೈಸಿ ಸವಾಲು

ಹೈದರಾಬಾದ್: ಭದ್ರಕೋಟೆಯಾಗಿರುವ ಹೈದರಾಬಾದ್‌ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ.

ಹೈದರಾಬಾದ್‌ನಿಂದ ಸ್ಪರ್ಧಿಸಿ ವಯನಾಡ್ ಅಲ್ಲ ಎಂದು ಓವೈಸಿ ಅವರು ರಾಹುಲ್ ಗಾಂಧಿಯವರ ಕೇರಳದ ಲೋಕಸಭಾ ಕ್ಷೇತ್ರವನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ.

ಬಹಿರಂಗ ಸವಾಲು ಹಾಕಿದ ಓವೈಸಿ ,  ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುವ ಬದಲು ಚುನಾವಣಾ ಮೈದಾನಕ್ಕೆ ಬಂದು ನನ್ನ ವಿರುದ್ಧ ಸ್ಪರ್ಧಿಸಿ ಎಂದು ಕರೆ ನೀಡಿದ್ದಾರೆ. ನೀವು ಸಿದ್ಧರಿದ್ದೀರಿ ಎಂದಾದರೆ ನಾನು ಸಿದ್ಧನಿದ್ದೇನೆ ಎಂದು ಅವರು ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.