Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸಲ್ಲ’ – ದಿಗ್ವಿಜಯ್ ಸಿಂಗ್

ಮಧ್ಯಪ್ರದೇಶ: ನಮ್ಮ ಪಕ್ಷ 2024ರ ಚುನಾವಣೆಯಲ್ಲಿ ಅಧಿಕಾರಕ್ಕೆ ತಂದರೆ ಬಜರಂಗದಳವನ್ನು ನಿಷೇಧಿಸುವುದಿಲ್ಲ. ಆದರೆ ಗೂಂಡಾಗಳು ಮತ್ತು ಗಲಭೆಕೋರರನ್ನು ಬಿಡುವುದಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ತಾವು ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಬಜರಂಗದಳವನ್ನು ನಿಷೇಧಿಸುವುದಿಲ್ಲ ಏಕೆಂದರೆ ಬಜರಂಗದಳದಲ್ಲಿ ಕೆಲವು ಒಳ್ಳೆಯ ಜನರು ಸಹ ಇರಬಹುದು ಹಾಗಾಗಿ ಬಜರಂಗದಳ ನಿಷೇಧ ಮಾಡಲ್ಲ ಆದರೆ ಗಲಭೆಗಳಲ್ಲಿ ಅಥವಾ ಹಿಂಸೆಗೆ ಸಂಬಂದಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದರು.

ಇನ್ನು ಹಿಂದುತ್ವದ ವಿಷಯದ ಬಗ್ಗೆ ಮಾತನಾಡಿದ ಅವರು, ನಾನೊಬ್ಬ ಹಿಂದೂ, ಈಗಲೂ ಹಿಂದೂ ಆಗಿದ್ದೆನೆ, ಹಿಂದೂ ಆಗಿ ಉಳಿಯುತ್ತೇನೆ. ನಾನು ಹಿಂದೂ ಧರ್ಮವನ್ನು ಅನುಸರಿಸುತ್ತೇನೆ ಜೊತೆಗೆ ನಾನು ಸನಾತನ ಧರ್ಮದ ಅನುಯಾಯಿಯಾಗಿದ್ದೇನೆ ಎಂದು ಹೇಳಿದ್ದಾರೆ.