Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ನಾವು ಬಿಜೆಪಿಯವರ ಹಾಗೆ ಮೂಢನಂಬಿಕೆ ಇಟ್ಟುಕೊಂಡಿಲ್ಲ’ -ಬಿ.ಕೆ ಹರಿಪ್ರಸಾದ್

ಕಲಬುರಗಿ: ನಾವು ಬಿಜೆಪಿಯವರ (BJP) ಹಾಗೆ ಮೂಢನಂಬಿಕೆ ಇಟ್ಟುಕೊಂಡಿಲ್ಲ, ಕಾಂಗ್ರೆಸ್ ಪಕ್ಷ ವೈಜ್ಞಾನಿಕ ನೆಲಗಟ್ಟಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ ಎಂದು ಎಮ್‍ಎಲ್‍ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದ ಸಂಧರ್ಭದಲ್ಲಿ ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಸ್ಥಳ ನೀಡಿದ್ದು. ನಾವು ಬಿತ್ತಿರೋ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ ಎಂದರು.

ಇನ್ನು ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಮೇಲೆ ಘೋಷಣೆಗಳಿಗೆ ಕಮ್ಮಿ ಇಲ್ಲ. ಬಿಜೆಪಿಯು ರಾಷ್ಟ್ರದಲ್ಲಿನ ವೈವಿಧ್ಯತೆಯನ್ನ ಹಾಳು ಮಾಡುತ್ತಿದ್ದು, ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತಿದೆಯೆಂದು ವಾಗ್ದಾಳಿ ನಡೆಸಿದ್ದಾರೆ.