Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 8 ಮಂದಿ ಮೃತ್ಯು, ಅನೇಕರಿಗೆ ಗಾಯ

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿ, ಅನೇಕ ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

ಸ್ಫೋಟದ ತೀವ್ರತೆಗೆ ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳಿಗೆ ಭಾಗಶಃ ಹಾನಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಹಲವಾರು ಕಟ್ಟಡದ ಅಡಿಯಲ್ಲಿ ಸಿಲುಕಿರುವ ಕುರಿತು ಶಂಕೆ ವ್ಯಕ್ತವಾಗಿದೆ.