‘ಬಿಜೆಪಿಯನ್ನು ಪರಾಭವಗೊಳಿಸಿ ಪರ್ಯಾಯ ಸರ್ಕಾರ ರಚನೆ ನಮ್ಮ ಗುರಿಯಾಗಬೇಕು’ -ಖರ್ಗೆ ಕರೆ
![](https://suddimane.com/wp-content/uploads/2023/09/WhatsApp-Image-2023-09-17-at-5.57.02-PM.jpeg)
ಹೈದರಾಬಾದ್: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಪರಾಭವಗೊಳಿಸುವುದು ಹಾಗೂ ದೇಶದಲ್ಲಿ ಪರ್ಯಾಯ ಸರ್ಕಾರವನ್ನು ರಚಿಸಲು ಶ್ರದ್ಧೆಯಿಂದ ಕೆಲಸ ಮಾಡುವುದು ಪಕ್ಷದ ಗುರಿಯಾಗಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮುಂಬರುವ ರಾಜ್ಯ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಎದುರಾಗಲಿರುವ ಪ್ರತಿಕೂಲ ಪರಿಣಾಮಗಳನ್ನು ಸಂಪೂರ್ಣ ಇಚ್ಛಾಶಕ್ತಿಯೊಂದಿಗೆ ಹಿಮ್ಮೆಟ್ಟಿಸಬೇಕು ಎಂದರು.
ಇನ್ನು ಮೋದಿ ಸರ್ಕಾರವು ಹೊಸ ವಿಷಯಗಳನ್ನು ಮುನ್ನೆಲೆಗೆ ತರುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ, ದಾರಿ ತಪ್ಪಿಸುವ ರಾಜಕೀಯ ಆಟವಾಡುತ್ತಿದೆ ಎಂದು ಟೀಕಿಸಿದ್ದಾರೆ.