Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಹಾರ: ಮನೆಗೆ ನುಗ್ಗಿ ಗುಂಡಿಕ್ಕಿ ಪತ್ರಕರ್ತನ ಹತ್ಯೆ ಮಾಡಿದ ದುಷ್ಕರ್ಮಿಗಳು

ಬಿಹಾರದಲ್ಲಿ ಪತ್ರಕರ್ತರೊಬ್ಬರ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೃತರನ್ನು ಬಿಮಲ್ ಯಾದವ್ ಎಂದು ಗುರುತಿಸಲಾಗಿದ. ಅರಾರಿಯಾ ಜಿಲ್ಲೆಯಲ್ಲಿ ರಾಣಿಗಂಜ್‌ ನಲ್ಲಿ ವಾಸವಾಗಿದ್ದು, ಇಂದು ಮುಂಜಾನೆ ಕೆಲವು ಅಪರಿಚಿತ ವ್ಯಕ್ತಿಗಳು ಅವರ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ

ನೇರವಾಗಿ ಎದೆಗೆ ಗುಂಡು ಹಾರಿಸಿದ ಪರಿಣಾಮ್ ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಪತ್ರಕರ್ತ ಬಿಮಲ್ ಅವರ ಕಿರಿಯ ಸಹೋದರ ಶಶಿಭೂಷಣ ಯಾದವ್ ಅಲಿಯಾಸ್ ಗಬ್ಬು ಯಾದವ್ ಕೂಡ ಕೊಲೆಯಾಗಿದ್ದರು.

ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪ್ರದೇಶದ ಸಂಸದರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.