Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರು: ಕುತೂಹಲ ಮೂಡಿಸಿದ ಡಿಕೆಶಿ- ತೇಜಸ್ವಿನಿ ಅನಂತಕುಮಾರ್ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ತೇಜಸ್ವಿನಿ ಅನಂತ ಕುಮಾರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ರಾಜಕೀಯವಾಗಿ ಅದು ಬಹಳ ಕುತೂಹಲ ಮೂಡಿಸಿದೆ.

ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಅನಂತಕುಮಾರ್ ಅವರು ಅಗಲಿದ ಬಳಿಕ ಹಲವು ಸಂದರ್ಭಗಳಲ್ಲಿ ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿ ತೇಜಸ್ವಿನಿ ಪ್ರತಿಕ್ರಿಯಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ತೇಜಸ್ವಿನಿ ಅವರು ಭೇಟಿಯಾಗಿರುವುದು ಸಾಕಷ್ಟು ಊಹಾಪೂಹಗಳಿಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ವಾಸ್ತವದಲ್ಲಿ ಈ ಭೇಟಿ ಹಿಂದೆ ರಾಜಕೀಯ ಉದ್ದೇಶ ಅಡಗಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.