Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ – 20 ಮಂದಿಯ ರಕ್ಷಣೆ, ಮುಂದುವರೆದ ಶೋಧ

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ಸಂಭವಿಸಿದೆ.

ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಮಕ್ಕಳ ಶೋಧ ಕಾರ್ಯಾ ನಡೆಯುತ್ತಿದೆ.

ಇನ್ನು ರಕ್ಷಣಾ ತಂಡದಿಂದ ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡವು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.