Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಣಿಪುರ ಹಿಂಸಾಚಾರ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಲೇ ಇದ್ದು ಇಂಫಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕಿಡಿಗೇಡಿಗಳು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ನಡೆದಿದೆ.

ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪು ಪೊಲೀಸ್ ಔಟ್‌ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ.

ಇನ್ನು ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿದೆ.