ಮಾಜಿ ಸಚಿವ ಮನ್ಪ್ರೀತ್ ಬಾದಲ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ
![](https://suddimane.com/wp-content/uploads/2023/09/WhatsApp-Image-2023-09-26-at-3.36.56-PM.jpeg)
ಪಂಜಾಬ್: ಆಸ್ತಿ ಖರೀದಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಪಂಜಾಬ್ನ ಮಾಜಿ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಬಾದಲ್ ವಿರುದ್ಧ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.
ಮನ್ಪ್ರೀತ್ ಸಿಂಗ್ ಬಾದಲ್ ದೇಶದಿಂದ ಪಲಾಯನ ಮಾಡಬಹುದೆಂಬ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳ ತಂಡ ವಿಮಾನ ನಿಲ್ದಾಣಗಳಲ್ಲಿ ಹದ್ದಿನ ಕಣ್ಣಿಟ್ಟಿದೆ ಎನ್ನಲಾಗಿದೆ.
ಇನ್ನು ಆಸ್ತಿ ಪ್ರಕರಣದಲ್ಲಿ ಬಾದಲ್ ಮತ್ತು ಇತರ ಐವರ ವಿರುದ್ಧ ವಿಜಿಲೆನ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.