Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮೇಘಸ್ಪೋಟ: ಓರ್ವ ದುರ್ಮರಣ, ಮೂವರಿಗೆ ಗಾಯ, ವಾಹನಗಳು ಜಖಂ

ಶಿಮ್ಲಾ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಯಿಂದ ಹಿಮಾಚಲ ಪ್ರದೇಶ ತತ್ತರಿಸಿ ಹೋಗಿದ್ದು, ಈ ನಡುವೆ ಕುಲು ಜಿಲ್ಲೆಯ ಕಿಯಾಸ್ ಮತ್ತು ನ್ಯೋಲಿಯಲ್ಲಿ ಮೇಘಸ್ಫೋಟ ಸಂಭವಿಸಿ, ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

https://suddimane.com/%e0%b2%96%e0%b3%8d%e0%b2%af%e0%b2%be%e0%b2%a4-%e0%b2%97%e0%b2%a3%e0%b2%bf%e0%b2%a4%e0%b2%b6%e0%b2%be%e0%b2%b8%e0%b3%8d%e0%b2%a4%e0%b3%8d%e0%b2%b0%e0%b2%9c%e0%b3%8d%e0%b2%9e%e0%b3%86-%e0%b2%a1%e0%b2%be/

ಇಂದು ಮುಂಜಾನೆ ನಡೆದ ಮೇಘಸ್ಫೋಟದಿಂದ 9 ವಾಹನಗಳು ಕೂಡ ಜಖಂಗೊಂಡಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಇದೂವರೆಗೂ ಸುಮಾರು 8 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.