ಮೇಲ್ಸೇತುವೆಯ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ
![](https://suddimane.com/wp-content/uploads/2023/07/WhatsApp-Image-2023-07-02-at-2.41.18-PM-735x400-1.jpeg)
ಮುಂಬೈ: ಇಲ್ಲಿನ ಕಾರೊಂದು ಮೇಲ್ಸೇತುವೆ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರಣ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಹಾರಾಷ್ಟ್ರದಲ್ಲಿ ನಡೆದಿದ್ದು, ಬೆಳಕಿಗೆ ಬಂದಿದೆ.
ಬೆಳಿಗ್ಗೆ ೭:೩೦ರ ಸುಮಾರಿಗೆ ನಾಗ್ಪುರದ ಬೋರ್ಖೆಡಿ ಮೇಲ್ಸೇತುವೆಯ ಮೇಲೆ ಕಾರು ಚಲಿಸುತ್ತಿದ್ದು, ಈ ಸಮಯ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊAಡಿದೆ. ಅತಿ ವೇಗದಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರಿಂದ ತಿಳಿದಿದೆ.
ಸ್ಥಳಕ್ಕೆ ಬುಟಿಬೋರಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂದು ತನಿಖೆ ಬಳಿಕ ತಿಳಿಯಲಿದ್ದು, ಸದ್ಯ ಗಾಯಾಳುಗಳು ಚೇತರಿಸಿಕೊಂಡ ಬಳಿಕ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಪೊಲೀಸರು ಸೂಚಿಸಿದ್ದಾರೆ.