Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಮೈತ್ರಿಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಲು ಗುರುವಾರ ಸಭೆ’- ಹೆಚ್‌ಡಿಕೆ

ರಾಮನಗರ: ಲೋಕಸಭಾ ಚುನಾವಣೆಗೆ ಸಂಬಂದಪಟ್ಟಂತೆ ಜೆಡಿಎಸ್-ಬಿಜೆಪಿ ನಡುವಿನ ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ. ಇದುವರೆಗೆ ಯಾವುದೇ ನಿರ್ಧಾರವನ್ನು ಎರಡೂ ಪಕ್ಷಗಳು ಪ್ರಕಟಿಸಿಲ್ಲ ಎಂದು ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ  ಸುದ್ದಿಗಾರರೊಂದಿಗೆ ಮಾತಾಡಿದ ಅವರು,ಇದುವರೆಗೆ ಕೇವಲ ಊಹಾಪೋಹಗಳು ಕೇಳಿಬಂದಿವೆ ಮಾತುಕತೆ ಮಾತ್ರ ನಡೆದಿಲ್ಲ. ಮೈತ್ರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಒಂದು ಸಭೆಯನ್ನು ಗುರುವಾರ ಕರೆಯಲಾಗಿದೆ. ಸಭೆಯಲ್ಲಿ ಎಲ್ಲ ಸಾಧಕ ಬಾಧಕಗಳನ್ನು ಚರ್ಚಿಸಿದ ಬಳಿಕ ಮೈತ್ರಿಯ ಸ್ವರೂಪದ ಬಗ್ಗೆ ಒಂದು ಚಿತ್ರಣ ಸಿಗುತ್ತದೆ ಎಂದು ಹೇಳಿದರು.

ಸೀಟು ಹೊಂದಾಣಿಕೆ ಬಗ್ಗೆ ಎರಡು ಪಕ್ಷಗಳ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಕಳೆದ‌ 2 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಕೆಟ್ಟ ಅಡಳಿತ ನೀಡಿರುವ ಹಿನ್ನೆಲೆಯಲ್ಲಿ ಒಂದು ಬಲಿಷ್ಠ ವಿರೋಧ ಪಕ್ಷದ ಅವಶ್ಯಕತೆಯನ್ನು ಬಿಜೆಪಿ ಮತ್ತು ತಮ್ಮ ಪಕ್ಷಗಳ ನಾಯಕರು ಮನಗಂಡಿದ್ದಾರೆ ಎಂದು ಹೇಳಿದರು.