Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ!

ತೆಲಂಗಾಣ: 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದ ಸಿರಿಸಿಲ್ಲಾದಲ್ಲಿ ನಡೆದಿದೆ.

6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಮೃತ ಬಾಲಕ.

ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನೆ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ ಮೊಳೆಯಲ್ಲಿ ನೇತಾಡುತ್ತಿರುವುದು ಕಂಡುಬಂದಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದಾನೆ.

ಇನ್ನು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಿಲ್ಲಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.