Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯ ಬಜೆಟ್‌ 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಹಲವು ಕಾರ್ಯಕ್ರಮಗಳ ಘೋಷಣೆ

ಬೆಂಗಳೂರು: 2023 ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಹಲವು ಕ್ಷೇತ್ರಗಳಿಗೆ ಕೊಡುಗೆಗಳನ್ನು ನೀಡಿದ್ದು, ಅಲ್ಪ ಸಂಖ್ಯಾತರಿಗೆ ಬಂಪರ್‍ ಗಿಫ್ಟ್ ನೀಡಲಾಗಿದೆ. ಈಗಿನ ೬೨ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗ ಉನ್ನತೀಕರಣ. ೬-೧೨ ತರಗತಿಯವರೆಗೆ ಉನ್ನತಿಕರಣ. ಮೌಲಾನಾ ಆಜಾದ್ ಶಾಲೆಗಳ ಸ್ವತಃ ಕಟ್ಟಡ ನಿರ್ಮಾಣಕ್ಕೆ ಕ್ರಮ.

ಮಹಿಳೆಯರಿಗೆ ಸಿಹಿ ಸುದ್ದಿ: ಉದ್ಯೋಗಿನಿ ಯೋಜನೆ ಅಡಿ ‘3 ಲಕ್ಷ’ ಸಾಲ ಸೌಲಭ್ಯ-ನೀವೂ ಅರ್ಜಿ ಸಲ್ಲಿಸಿ

ಅಲ್ಪಸಂಖ್ಯಾತ ವಿಧ್ಯಾರ್ಥಿಗಳ ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ ಗೆ ಸಾಲ ನೀಡಲು ನಿರ್ಧಾರ.

ವ್ಯಾಸಂಗ ಮಾಡಲು ೨% ಬಡ್ಡಿ ದರದಲ್ಲಿ ಸಾಲ. ಅಲ್ಪಸಂಖ್ಯಾತ ಯುವಕರಿಗೆ ಕೌಶಲ್ಯ ತರಬೇತಿ ರಾಮನಗರ,ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೌಶಲ್ಯಭಿವೃದ್ದಿ ತರಬೇತಿ ಗೆ ನಾಲ್ಕು ಕೋಟಿ ಮೀಸಲು . ಬೆಂಗಳೂರಿನ ಹಜ್ ಭವನದಲ್ಲಿ IAS/KAS ತರಬೇತಿ ಪ್ರಾರಂಭ. ವಸತಿ ಸಹಿತ ತರಬೇತಿ ನೀಡಲು ನಿರ್ಧಾರ. ಅಲ್ಪಸಂಖ್ಯಾತ ೨೫೦ ರ ವಿವಿ ರ್ಯಾಕಿಂಗ್ ಪಡೆದ ವಿಧ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು‌ ಶೂನ್ಯ ಬಡ್ಡಿಯಲ್ಲಿ ಸಾಲ.

ಅರ್ಧಕ್ಕೆ ನಿಂತ ಶಾದಿಮಹಲ್ ಮರು ನಿರ್ಮಾಣಕ್ಕೆ ಚಾಲನೆ . 54 ಕೋಟಿ ರೂಪಾಯಿ ಇದಕ್ಕಾಗಿ ಮೀಸಲು ಹಿಂದೂಯೆತರ ಧಾರ್ಮಿಕ ಸಂಸ್ಥೆಗಳ ತಸ್ತಿಕ ಹಣ ಹೆಚ್ಚಳ, 48 ಸಾವಿರ ಕೋಟಿಯಿಂದ 60 ಸಾವಿರ ಕೋಟಿಗೆ ಹೆಚ್ಚಳ. ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿಗೆ 360 ಕೋಟಿ ಮೀಸಲು. ಸ್ವಾವಲಂಬಿ ಸಾರಥಿ ಯೋಜನೆ ಅಲ್ಪ ಸಂಖ್ಯಾತರಿಗೆ ಅನ್ವಯ . ನಾಲ್ಕು ಚಕ್ರಗಳ ವಾಹನ ಖರೀದಿಗೆ 3 ಲಕ್ಷ ಸಹಾಯಧನ.

ಕ್ರಿಶ್ಚಿಯನ್ ನಿಗಮ ಮಂಡಳಿ ಸ್ಥಾಪನೆಗೆ 100 ಕೋಟಿ ಮೀಸಲು. ಜೈನರ ಪುಣ್ಯಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ‌ಮೀಸಲು. ರಾಜ್ಯದಲ್ಲಿ 49,000 ವಕ್ಪ ಆಸ್ತಿಗಳ ಸಂರಕ್ಷಣೆಗೆ ಕ್ರಮ. ವಕ್ಪ ಆಸ್ತಿ ಸಂರಕ್ಷಣೆಗೆ 50 ಕೋಟಿ ಹಣ ಮೀಸಲು . ಹಲಸೂರು ಗುರುದ್ವಾರ ಅಭಿವೃದ್ಧಿಗೆ 25 ಕೋಟಿ ಮೀಸಲು ಇಡಲಾಗಿದೆ ಎಮದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿ ತಿಳಿಸಿದರು.