Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರೈಲು ಹಿಡಿಯಲು ಪ್ಲಾಟ್‌ಫಾರ್ಮ್‌ಗೆ ಕಾರು ಚಾಲನೆ ಮಾಡಿದ ಯುಪಿ ಸಚಿವ

:ರೈಲು ಹತ್ತಲು ತಡವಾಯಿತು ಎಂದು ಉತ್ತರಪ್ರದೇಶದ ಪಶು ಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಸೈನಿ ನೇರವಾಗಿ ರೈಲ್ವೇ ಪ್ಲಾಟ್‌ಫಾರ್ಮ್‌ಗೆ ಕಾರು ನುಗ್ಗಿಸಿದ ಘಟನೆ ನಡೆದಿದೆ.

ಸಚಿವರು ತಮ್ಮ ವಿವಿಐಪಿ ಎಸ್‍ಯುವಿ ಕಾರನ್ನು ರೈಲು ನಿಲ್ದಾಣದೊಳಗೆ ಚಲಾಯಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಸಚಿವರ ಈ ನಡೆಗೆ ಖಂಡನೆ ವ್ಯಕ್ತವಾಗುತ್ತಿದೆ.

ಕಾರ್ಯಕ್ರಮವೊಂದಕ್ಕೆ ಹೋಗುವ ಹಿನ್ನಲೆ ಸಚಿವರು ಲಕ್ನೋದಿಂದ ರೈಲಿನಲ್ಲಿ ಬರೇಲಿಗೆ ಹೋಗಿ ನಂತರ ಹೌರಾ ಅಮೃತಸರ ಎಕ್ಸ್ ಪ್ರೆಸ್ ರೈಲನ್ನು ಹಿಡಿಯಬೇಕಿತ್ತು. ಹೀಗಾಗಿ ಅವರು ಚಾರ್‍ಬಾಗ್ ರೈಲು ನಿಲ್ದಾಣದಲ್ಲಿ ಪ್ಲಾಟ್‍ಫಾರ್ಮ್ ಸಂಖ್ಯೆ 4ಕ್ಕೆ ರೈಲು ಆಗಮಿಸುತ್ತದೆ. ಆದರೆ ಅವರು ರೈಲ್ವೇ ಪ್ಲಾಟ್‍ಫಾರ್ಮ್ ಗೆ ಬರೋದು ತಡವಾಗಿತ್ತು. ಈ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ಅಂಗವಿಕಲರಿಗೆ ಮೀಸಲಿಟ್ಟಿದ್ದ ರ್ಯಾಂಪ್‍ಗೆ ತೆಗೆದುಕೊಂಡು ಹೋಗಿ ಎಸ್ಕಲೇಟರ್ ಮೂಲಕ ನೇರವಾಗಿ ಪ್ಲಾಟ್ ಫಾರ್ಮ್ ಒಳಗೆ ಚಲಾಯಿಸಿದ್ದಾರೆ.

ಈ ರೀತಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಈ ಕುರಿತು ವಿಪಕ್ಷ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ಸಚಿವರು ಪ್ಲಾಟ್ ಫಾರ್ಮ್ ಗೆ ಬುಲ್ಡೋಜರ್ ಕೊಂಡೊಯ್ಯದಿದ್ದಕ್ಕೆ ಜನರು ಅವರಿಗೆ ಕೃತಜ್ಞರಾಗಿರಬೇಕು ಎಂದು ಟೀಕಿಸಿದ್ದಾರೆ.