Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಶೇಷ ಅಧಿವೇಶನಕ್ಕೂ ಮೊದಲು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಸೆಪ್ಟೆಂಬರ್‌ 18ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಪೂರ್ವಭಾವಿಯಾಗಿ ಸೆಪ್ಟೆಂಬರ್‌ 17ರ ಸಂಜೆ 4.30ಕ್ಕೆ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ.

ಇತ್ತೀಚೆಗಷ್ಟೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, ಸೆ.18ರಿಂದ 22ರವರೆಗೆ ಐದು ದಿನಗಳ ಕಾಲ ಲೋಕಸಭೆಯ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ತಿಳಿಸಿದ್ದರು.

ಈ ತಿಂಗಳ 18ರಿಂದ ಆರಂಭವಾಗಲಿರುವ ಸಂಸತ್‌ ವಿಶೇಷ ಅಧಿವೇಶನಕ್ಕೂ ಮೊದಲು ಸೆ.17ರ ಸಂಜೆ ಸರ್ವ ಪಕ್ಷ ಮುಖಂಡರ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಂಬಂಧಪಟ್ಟ ಪಕ್ಷದ ಎಲ್ಲಾ ಮುಖಂಡರುಗಳಿಗೂ ಇ-ಮೇಲ್‌ ಹಾಗೂ ಪತ್ರಗಳನ್ನು ಕಳುಹಿಸಲಾಗಿದೆ ಎಂದು ಎಕ್ಸ್‌ ನಲ್ಲಿ ಜೋಶಿ ತಿಳಿಸಿದ್ದಾರೆ. ಸೋಮವಾರ ಕರೆದಿರುವ ಸರ್ವ ಪಕ್ಷ ಸಭೆಯಲ್ಲಿ ವಿಶೇಷ ಅಧಿವೇಶನದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ