Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ವೈದ್ಯ ಸಂಗಣ್ಣ ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

ವಚನ: : ಐದು ತತ್ತ್ವಂಗಳಿಂದಾದ ದೇಹಕ್ಕೆ ರೋಗರುಜೆಯಹುದೆ ?

ಕಾಯತತ್ವಂಗಳ ಗೊತ್ತಿನಲ್ಲಿ ನಿಂದು,

ಅವರವರ ಚಿಕಿತ್ಸೆಯಲ್ಲಿ ಹೊತ್ತು ನಿತ್ತರಿಸುವುದೆ ಕ್ರಮ.

ಅದೆಂತೆಂದಡೆ :

ಭಕ್ತಿನಿಷ್ಠೆ , ವಿಶ್ವಾಸನಿಷ್ಠೆ, ಜ್ಞಾನನಿಷ್ಠೆ.

ಇಂತಿ ಸದ್ಭಾವ ನೆಲೆಗೊಳ್ಳದ ಕಾರಣ,

ತನುವಿಂಗೆ ಅನುಪಾನವ ಪಾನವ ಮಾಡಬೇಕು.

ಮೇಲೆ ಅರಿದಡೆ, ಮನವು ಮನದಲ್ಲಿ ನಿಲಬೇಕು.ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವನೊಡಗೂಡಬೇಕು.

 

-ವೈದ್ಯ ಸಂಗಣ್ಣ