Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಶಾಲೆಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಗೌಪ್ಯವಾಗಿ ವಿವಾಹವಾದ ಶಿಕ್ಷಕ; ಪ್ರಕರಣ ದಾಖಲು

ಬೀದರ್;ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಗೌಪ್ಯವಾಗಿ ವಿವಾಹ ಮಾಡಿಕೊಂಡಿದ್ದ ಶಾಲಾ ಶಿಕ್ಷಕನಿಗೆ ಅಮಾನತು ಮಾಡಲಾಗಿದೆ.

ಭಾಲ್ಕಿ ತಾಲೂಕಿನ ಹಲಸಿ ತೂಗಾಂವ್ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಸಂದೀಪ್ ಕುಮಾರ್ ಅವರನ್ನು ಅಮಾನತು ಮಾಡಿರುವ ಬಗ್ಗೆ ವರದಿಯಾಗಿದೆ.

ಶಿಕ್ಷಕ ಸಂದೀಪ್ ಕುಮಾರ್ ಅವರ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ಡಿಡಿಪಿಐ ಸಲೀಂ ಪಾಷಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಶಿಕ್ಷಕ ಭಾಲ್ಕಿ ತಾಲೂಕಿನ ಹಲಸಿ ತೂಗಾಂವ್ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಗೌಪ್ಯವಾಗಿ ಮದುವೆಯಾಗಿದ್ದ.

ಈ ಮೊದಲು ಆತನಿಗೆ ಮದುವೆಯಾಗಿ ಮಗುವಿದ್ದು, ಇದೀಗ ಹಲಸಿ ತೂಗಾಂವ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಎರಡನೇ ಮದುವೆಯಾಗಿದ್ದನು.

ಈ ಕುರಿತು ಶಿಶು ಅಭಿವೃದ್ಧಿ ಅಧಿಕಾರಿ ಶಿಕ್ಷಕನ ವಿರುದ್ಧ ಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಿದ್ದರು.