Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಶೀಘ್ರದಲ್ಲೇ ಬರ ತಾಲೂಕುಗಳ ಘೋಷಣೆ, ಕೇಂದ್ರಕ್ಕೂ ವರದಿ’: ಜಿ ಪರಮೇಶ್ವರ್​

ಹುಬ್ಬಳ್ಳಿ: ಬರ ಪೀಡಿತ ತಾಲೂಕು ಘೋಷಣೆ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಶೀಘ್ರದಲ್ಲೇ ಬರ ತಾಲೂಕುಗಳನ್ನು ಘೋಷಣೆ ಮಾಡಲಾಗುತ್ತೆ. ಬರಗಾಲ ಕುರಿತು ಕೇಂದ್ರಕ್ಕೂ ವರದಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್​ ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿ ಮಾತನಾಡಿದ ಅವರು, ಸಂಪುಟದಲ್ಲಿ ಬರ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ‌. ಬರಗಾಲ ಕುರಿತು ಕೇಂದ್ರ ಸರ್ಕಾರಕ್ಕೂ ವರದಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಸನಾತನ ಧರ್ಮ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ. ನಾನು ಬೇರೆಯವರ ವಿಶ್ಲೇಷಣೆಗಳಿಗೆ ಉತ್ತರ ಕೊಡುವುದಿಲ್ಲ. ಬಿಜೆಪಿಯವರು ಹೋರಾಟ ಮಾಡಲಿ. ರಾಜ್ಯದಲ್ಲಿ ಬಿಜೆಪಿಯವರಿಗೆ ಜನತೆ ಉತ್ತರ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಜನ ಉತ್ತರ ನೀಡಲಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.