Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಚಿವ ಡಿ.ಸುಧಾಕರ್‌ ವಿರುದ್ಧದ ಕೇಸ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಸಚಿವ ಡಿ.ಸುಧಾಕರ್ ವಿರುದ್ಧದ ದೌರ್ಜನ್ಯ ಕೇಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆ ನೀಡಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಸಚಿವ ಡಿ.ಸುಧಾಕರ್ ವಿರುದ್ದ ಸುಬ್ಬಮ್ಮ ಎಂಬುವರು ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ದೂರಿನ ಮೇರೆಗೆ ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸುಧಾಕರ್ ವಿರುದ್ಧ ಕೇಸ್ ದಾಖಲಾಗಿತ್ತು.

ಇನ್ನು ಈ ಪ್ರಕರಣದ ರದ್ದು ಕೋರಿ ಸುಧಾಕರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಅಕ್ಟೋಬರ್​3ಕ್ಕೆ ಮುಂದೂಡಿದೆ.