‘ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ’ – ಸಿಎಂ ಸ್ಟಾಲಿನ್
![](https://suddimane.com/wp-content/uploads/2023/09/WhatsApp-Image-2023-09-23-at-2.42.24-PM.jpeg)
ಚೆನ್ನೈ: ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸ್ಟಾಲಿನ್, ಅಂಗಾಂಗ ದಾನದಲ್ಲಿ ತಮಿಳುನಾಡು ಮುಂಚೂಣಿಯಲ್ಲಿದ್ದು, ನೂರಾರು ಮಂದಿ ರೋಗಿಗಳಿಗೆ ಜೀವದಾನ ಮಾಡಿದೆ ಎಂದರು.
ಇನ್ನು ಅಂಗಾಂಗ ದಾನಿಗಳು ಹಾಗೂ ಅವರ ಕುಟುಂಬದ ಸದಸ್ಯರ ತ್ಯಾಗವನ್ನು ಗೌರವಿಸುವ ಸಲುವಾಗಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.