Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಸಾರಿಗೆ ಸಿಬ್ಬಂದಿಗೂ ಇನ್ಮುಂದೆ ಪಿಂಚಣಿ’ – ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಬೆಂಗಳೂರು: ಸಾರಿಗೆ ಸಿಬ್ಬಂದಿಗೆ ಇನ್ಮುಂದೆ ಪಿಂಚಣಿ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ಹಿಂದೆ ಪ್ರತಿಭಟನೆ ನಡೆದಾಗ ಕೆಲವರನ್ನು ವಜಾ ಮಾಡಲಾಗಿತ್ತು. 2020ರಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಇರಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಯಾರನ್ನೂ ಕೆಲಸದಿಂದ ವಜಾಗೊಳಿಸಿಲ್ಲ ಎಂದರು.

ಇನ್ನು ಬಿಎಂಟಿಸಿ ನೌಕರರ ವಿರುದ್ಧದ ಕೇಸ್​ ಕೋರ್ಟ್​ನಲ್ಲಿರುವುದರಿಂದ ವಿಳಂಬವಾಗುತ್ತಿದ್ದು, ವಜಾಗೊಂಡಿದ್ದ ಬೇರೆ ನಿಗಮದ ನೌಕರರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದಿದ್ದಾರೆ,

ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಗಳಿಗೆ ಯಾವುದೇ ನಷ್ಟ ಇಲ್ಲ. ಸರ್ಕಾರ ಆ ಹಣವನ್ನು ಸಂಸ್ಥೆಗಳಿಗೆ ನೀಡುತ್ತದೆ ಎಂದು ಹೇಳಿದರು.