Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಿಂಗಾಪುರದ ಅಧ್ಯಕ್ಷರಾಗಿ ಭಾರತೀಯ ಮೂಲದ ಷಣ್ಮುಗರತ್ನಂ ಪ್ರಮಾಣ ವಚನ.!

 

 

ಸಿಂಗಾಪುರ: ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಅಧಿಕಾರ ಸ್ವೀಕರಿಸಿದ್ದಾರೆ.

ಅವರಿಗೆ ಆ ದೇಶದ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಥರ್ಮನ್ 6 ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಇತ್ತೀಚಿನ ಚುನಾವಣೆಯಲ್ಲಿ 70.4% ಮತಗಳನ್ನು ಗಳಿಸಿದ ಷಣ್ಮುಗರತ್ನಂ ಅವರು ತಮ್ಮ ಎದುರಾಳಿಗಳಿಗಿಂತ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ. ಈ ಹಿಂದೆ ಭಾರತೀಯ ಮೂಲದ ಇಬ್ಬರು ಸಿಂಗಾಪುರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.!