Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಿಲಿಂಡರ್ ಸ್ಫೋಟ – 8 ಮನೆಗಳಿಗೆ ಹಾನಿ

ಬೆಂಗಳೂರು: ಚಾಮರಾಜಪೇಟೆಯ ಅನಂತಪುರದ ಬಳಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 8 ಮನೆಗಳು ಹಾನಿಯಾಗಿರುವ ಘಟನೆ ನಡೆದಿದೆ.

ಸಿಲಿಂಡರ್‌ ಸ್ಪೋಟದ ತೀವ್ರತೆಗೆ 8 ಶೀಟ್ ಮನೆಗಳು ಹಾನಿಗೊಳಗಾಗಿದ್ದು, ಈ ವೇಳೆ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

ಇನ್ನು ಈ ಅವಘಡದಲ್ಲಿ ಗೋಧಾಮು ಸೇರಿದಂತೆ ಪಕ್ಕದಲ್ಲಿರುವ 8 ಮನೆಗಳಿಗೂ ಬೆಂಕಿ ತಗುಲಿದ್ದು, ಈ ವೇಳೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.