ಸುಪ್ರೀಂ ಕೋರ್ಟಿಗೆ ಪ್ರಜ್ವಲ್ ರೇವಣ್ಣ ಅಪೀಲ್.!
![](https://suddimane.com/wp-content/uploads/2023/09/745.png)
ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಆರೋಪದಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೋಕಸಭಾ ಸದಸ್ಯತ್ವನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು.
ಈ ಆದೇಶದ ವಿರುದ್ಧ ಪ್ರಜ್ವಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಜ್ವಲ್ ಅರ್ಜಿ ಶುಕ್ರವಾರ ಅಥವಾ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಈ ಹಿಂದೆ ಸದಸ್ಯತ್ವ ಅಮಾನತು ಆದೇಶಕ್ಕೆ ತಡೆ ನೀಡಬೇಕು ಎಂದು ಪ್ರಜ್ವಲ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರೂ ಅದು ವಜಾಗೊಂಡಿತ್ತು.