Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸುಪ್ರೀಂ ಕೋರ್ಟಿಗೆ ಪ್ರಜ್ವಲ್ ರೇವಣ್ಣ ಅಪೀಲ್.!

 

ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಆರೋಪದಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೋಕಸಭಾ ಸದಸ್ಯತ್ವನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು.

ಈ ಆದೇಶದ ವಿರುದ್ಧ ಪ್ರಜ್ವಲ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಪ್ರಜ್ವಲ್ ಅರ್ಜಿ ಶುಕ್ರವಾರ ಅಥವಾ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಈ ಹಿಂದೆ ಸದಸ್ಯತ್ವ ಅಮಾನತು ಆದೇಶಕ್ಕೆ ತಡೆ ನೀಡಬೇಕು ಎಂದು ಪ್ರಜ್ವಲ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರೂ ಅದು ವಜಾಗೊಂಡಿತ್ತು.