Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್(62) ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೋಹನ್ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಗದೇ ಭಾನುವಾರ ವಿಧಿವಶರಾಗಿದ್ದಾರೆ.

ಆಗಸ್ಟ್ 16 ರಿಂದ ‘ಗೃಹಲಕ್ಷ್ಮಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಮೋಹನ್ ಒಡೆತನದಲ್ಲಿ ಜಯಸಿಂಹ, ಭಲೇ ಚತುರ, ಜೂಲಿ , ಹೂಮಳೆ, ಅಳಿಮಯ್ಯ, ಆಚಾರ್ಯ, ಪೊಲೀಸ್ ಪವರ್, ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ಮಾಣ ಮಾಡಿದ್ದರು.

ಇನ್ನು ನಿರ್ಮಾಪಕ ಮೋಹನ್ ಅವರು ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲಿಕರಾಗಿದ್ದು, ಮೃತರು ಇಬ್ಬರೂ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.