Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

— -ಹಡಪದ ಅಪ್ಪಣ್ಣ ಅವರ ವಚನ .

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ ?

ಕಡೆ ನಡುವೆಂದೇನೊ ಮೃಡನ ಹಾಡುವಂಗೆ ?

ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ ?

ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ ?

ಕಲಿಯುಗದ ಕತ್ತಲೆಯ ದಾಂಟಿದವಂಗೆ, ನಿಮ್ಮ ನೆಲೆಯನರಿದ ಶರಣಂಗೆ

ಇನ್ನು ಸ್ಥಲನೆಲೆ ಆವುದುಂಟು ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?

 

-ಹಡಪದ ಅಪ್ಪಣ್ಣ