Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹಿಟ್ ಆಂಡ್ ರನ್ ಕೇಸ್ ನಲ್ಲಿ ಗಿಚ್ಚಗಿಲಿಗಿಲಿ ಕಲಾವಿದ ಚಂದ್ರಪ್ರಭಾ

ಚಿಕ್ಕಮಗಳೂರು : ಗಿಚ್ಚಗಿಲಿ ಗಿಲಿ ಕಾಮಿಡಿ ಕಾರ್ಯಕ್ರಮದ ಕಲಾವಿದ ಚಂದ್ರಪ್ರಭಾಗೆ ಸೇರಿದ ಕಾರೊಂದು ಚಿಕ್ಕಮಗಳೂರಿನಲ್ಲಿ ಅಪಘಾತ ನಡೆಸಿ ಪರಾರಿಯಾದ ಘಟನೆ ನಡೆದಿದೆ.

ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಮಾಲ್ತೇಶ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾಮಿಡಿ ಕಿಲಾಡಿ ಚಂದ್ರಪ್ರಭಾ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಮಾಲ್ತೇಶ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಚಿಕ್ಕಮಗಳೂರು ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.